ಅನ್ನಭಾಗ್ಯ ಯೋಜನೆಯಲ್ಲಿ ಬದಲಾವಣೆ; ಇನ್ಮುಂದೆ ಅನ್ನಭಾಗ್ಯದ ಅಕ್ಕಿ ಮನೆ ಬಾಗಿಲಿಗೆ

0

ಅನ್ನ ಭಾಗ್ಯ ಯೋಜನೆಯು ಕರ್ನಾಟಕ ಸರ್ಕಾರವು ಇತ್ತೀಚೆಗೆ ಜಾರಿಗೊಳಿಸಿದ ಖಾತರಿ ಯೋಜನೆಗಳಲ್ಲಿ ಒಂದಾಗಿದೆ. ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ ಅನ್ನಭಾಗ್ಯ ಯೋಜನೆಯಡಿ ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ವಿತರಿಸುವುದಾಗಿ ರಾಜ್ಯ ಸರ್ಕಾರ ಭರವಸೆ ನೀಡಿತ್ತು. ಇದೀಗ ಸರ್ಕಾರ ಮತ್ತೊಂದು ಹೊಸ ಸುದ್ದಿಯನ್ನು ನೀಡಿದೆ.

anna bhagya scheme 2023

ಈಗ ಪ್ರತಿಯೊಬ್ಬರಿಗೂ 5 ಕೆಜಿ ಅಕ್ಕಿ ವಿತರಿಸಲಾಗಿದ್ದು, ಉಳಿದಂತೆ ಐದು ಕೆಜಿ ಅಕ್ಕಿಗೆ 34 ರೂ.ನಂತೆ ಒಟ್ಟು 170 ರೂ.ಗಳನ್ನು ಫಲಾನುಭವಿಗಳ ಖಾತೆಗೆ ಜಮಾ ಮಾಡಲಾಗಿದೆ. ಐದು ಗ್ಯಾರಂಟಿ ನಂತರ ಕರ್ನಾಟಕ ಸರ್ಕಾರ ಮತ್ತೊಂದು ಹೊಸ ಯೋಜನೆಯನ್ನು ಪರಿಚಯಿಸಿತು. ರಾಜ್ಯದ ಹಿರಿಯ ನಾಗರಿಕರ ಪಡಿತರ ಚೀಟಿದಾರರಿಗೆ ಈ ಸೌಲಭ್ಯ ಸಹಕಾರಿಯಾಗಿದೆ.

75 ವರ್ಷ ಮೇಲ್ಪಟ್ಟವರಿಗೆ ಅನ್ನ ಭಾಗ್ಯ ಯೋಜನೆಯಡಿ ಪಡಿತರವನ್ನು ಮನೆ ಬಾಗಿಲಿಗೆ ತಲುಪಿಸಲು ಆಹಾರ ಇಲಾಖೆಯಿಂದ ಸಿದ್ಧತೆ ನಡೆದಿದೆ. ಹಿರಿಯ ನಾಗರಿಕರಿಗೆ ಪಡಿತರ ವಿತರಣೆಗೆ ಅನುಕೂಲವಾಗುವಂತೆ ಆಹಾರ ಇಲಾಖೆ ಕ್ರಮ ಕೈಗೊಂಡಿದೆ. ನ್ಯಾಯಬೆಲೆ ಅಂಗಡಿಗಳಿಗೆ ಹೋಗದೆ ಮನೆಬಾಗಿಲಿಗೆ ಪಡಿತರ ವಿತರಿಸಲು ಹಿರಿಯ ನಾಗರಿಕ ಸ್ನೇಹಿ ನೀತಿ ಜಾರಿಗೆ ತರಲು ಆಹಾರ ಇಲಾಖೆ ನಿರ್ಧರಿಸಿದೆ.

ಇದನ್ನೂ ಸಹ ಓದಿ: ಅರಣ್ಯ ಇಲಾಖೆ ನೇಮಕಾತಿ 2023: ಅರ್ಜಿ ಸಲ್ಲಿಸಲು ಅಕ್ಟೋಬರ್ 26 ಕೊನೆಯ ದಿನಾಂಕ

ಪಡಿತರ ಚೀಟಿ ಹೊಂದಿರುವ ಕುಟುಂಬದ ಸದಸ್ಯರು ನ್ಯಾಯಬೆಲೆ ಅಂಗಡಿಗೆ ತೆರಳಿ ಬಯೋಮೆಟ್ರಿಕ್ ನೀಡಿದ ನಂತರ ಅವರ ಕುಟುಂಬಕ್ಕೆ ನಿಗದಿಪಡಿಸಿದ ಅಕ್ಕಿ ಸೇರಿದಂತೆ ಪಡಿತರವನ್ನು ಪಡೆಯಬೇಕು. ನ್ಯಾಯಬೆಲೆ ಅಂಗಡಿಗೆ ಹೋಗಿ ಪಡಿತರ ಪಡೆಯಲು ಪರದಾಡುವ ವೃದ್ಧರ ಮನೆ ಬಾಗಿಲಿಗೆ ಪಡಿತರ ತಲುಪಿಸುವ ಯೋಜನೆ ರೂಪಿಸಲಾಗಿದೆ.

ಪಡಿತರ ಚೀಟಿಯಲ್ಲಿ ತಿಳಿಸಿರುವಂತೆ 75 ವರ್ಷ ಮೇಲ್ಪಟ್ಟ ವೃದ್ಧರಿಗೆ ಮತ್ತು 75 ವರ್ಷಕ್ಕಿಂತ ಕಡಿಮೆ ವಯಸ್ಸಿನ ಸದಸ್ಯರಿಲ್ಲದ ದಂಪತಿಗಳಿಗೆ ಮನೆ ಬಾಗಿಲಿಗೆ ಪಡಿತರ ನೀಡಲಾಗುವುದು. ಪಡಿತರ ಚೀಟಿಯಲ್ಲಿ 75 ವರ್ಷದೊಳಗಿನ ಸದಸ್ಯರ ಹೆಸರು ನಮೂದಿಸಿದ್ದರೂ, ಕೆಲಸಕ್ಕಾಗಿ ವಲಸೆ ಬಂದಿದ್ದರೆ ಅಂತಹ ಕುಟುಂಬಗಳ ಹಿರಿಯರು ಕೋರಿದರೆ ಅವರ ಮನೆ ಬಾಗಿಲಿಗೆ ಪಡಿತರವನ್ನು ತಲುಪಿಸಲಾಗುವುದು ಎಂದು ಹೇಳಲಾಗಿದೆ.

Leave A Reply

Your email address will not be published.